ಮಾತಿನ ಮೋಡಿಗಾರ ಡಾ. ಶ್ರೀಪಾದ ಶೆಟ್ಟಿಗೆ ೨೩ ನೇ ಉ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸಾರಥ್ಯ :
ಕುಮಟಾ : ಡಿಸೆಂಬರ್ 27 ಮತ್ತು 28ರಂದು ಹೊನ್ನಾವರದಲ್ಲಿ ನಡೆಯಲಿರುವ ಉತ್ತರ ಕನ್ನಡ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಶ್ರೀಪಾದ ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ಅಧೀಕೃತ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ದಾಂಡೇಲಿಯ ಜಿಲ್ಲಾ ಸಾಹಿತ್ಯ ಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ಆಯ್ಕೆ ಸರ್ವಾನುಮತದಿಂದ ನಡೆದಿದೆ ಸಭೆಯಲ್ಲಿ ಹೊನ್ನಾವರ ತಾಲೂಕು